LatestNational

*ದೇವಸ್ಥಾನದ ಗೋಡೆ ಕುಸಿತ: 9 ಮಕ್ಕಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಗೆ ದೇವಸ್ಥಾನದ ಗೋಡೆ ಕುಸಿದ ಪರಿಣಾಮ 9 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.

ದೇವಸ್ಥಾನದ ಪಕ್ಕದಲ್ಲಿದ್ದ ಶೆಡ್ ನಲ್ಲಿ ಮಕ್ಕಳು ಶಿವಲಿಂಗ ಮಾಡುತ್ತಿದ್ದರು. ಶಿಥಲಗೊಂಡಿದ್ದ ದೇವಾಲಯದ ಗೋಡೆ ಏಕಾಏಕಿ ಕುಸಿದುಬಿದ್ದಿದೆ. 9 ಮಕ್ಕಳು ಸಾವನ್ನಪ್ಪಿದ್ದಾರೆ. ಮೃತ ಮಕ್ಕಳು 10 ರಿಂದ 14 ವರ್ಷದೊಳಗಿನವರಾಗಿದ್ದಾರೆ.

ಗಾಯಾಳು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವಸ್ಥಾನದಲ್ಲಿ ನಡೆಯಲಿರುವ ಭಗವತ್ ಕಥಾ ಕಾರ್ಯಕ್ರಮಕ್ಕಾಗಿ ಮಕ್ಕಳು ಶಿವಲಿಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button