*ಬೆಳಗಾವಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಮಹಾಂತೇಶ್, ಸಾಕ್ಷಿ ಹಾಗೂ ಅವರ ಮಗು ಮೃತ ದುರ್ದೈವಿಗಳು. ರಾಯಬಾಗ ರೈಲ್ವೆ ಸ್ಟೇಷನ್ ಸಮೀಪ ಬೈಕ್ ನಲ್ಲಿ ಸಾಗುತ್ತಿದ್ದಾಗ ಆಟೋಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಬೈಕ್ ಸವಾರ ಮಹಾಂತೇಶ್, ಅವರ ಪತ್ನಿ ಸಾಕ್ಷಿ ಹಾಗೂ 9 ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. … Continue reading *ಬೆಳಗಾವಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು*