Belagavi NewsBelgaum NewsCrimeKannada NewsKarnataka News

*ಸವದತ್ತಿಯಲ್ಲಿ ಭೀಕರ ಅವಘಡ: ಗಣಿಗಾರಿಕೆ ವೇಳೆ ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವೀಲುತೀರ್ಥ ಜಲಾಶಯದ ಸಮೀಪ ಕಲ್ಲು ಗಣಿಗಾರಿಕೆ ವೇಳೆ ಸಂಭವಿಸಿದ ಭೀಕರ ಅವಘಡದಲ್ಲಿ ಇಬ್ಬರು ಯುವ ಕಾರ್ಮಿಕರು ಮೃತಪಟ್ಟ ಘಟನೆ ನಡೆದಿದೆ. 

ಜಾರ್ಖಂಡ ಮೂಲದ ರವಿಕುಮಾರ ಸಿಂಗ್ (18) ಹಾಗೂ ಸುಭಾಷ ಸಿಂಗ್ (18) ಎಂದು ಗುರುತಿಸಲಾಗಿದೆ.

Home add -Advt

ಕಲ್ಯಾಣ ಶೆಟ್ಟಿ ಅಸೋಸಿಯೇಷನ್‌ಗೆ ಸೇರಿದ ಗಣಿಗಾರಿಕೆ ಪ್ರದೇಶದಲ್ಲಿಗಣಿಗಾರಿಕೆ ಕಾರ್ಯಕ್ಕಾಗಿ ಪಡೆದಿದ್ದ 11 ಕೆವಿ ವಿದ್ಯುತ್ ಸಂಪರ್ಕದ ಸಮೀಪ ಹಿಟ್ಯಾಚ್ ಜೆಸಿಬಿಯಿಂದ ಕೆಲಸ ಮಾಡುತ್ತಿದ್ದ ವೇಳೆ, ಯಂತ್ರದ ಬಕೆಟ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ದುರಂತ ಸಂಭವಿಸಿದೆ.

ವಿದ್ಯುತ್ ತಗುಲುತ್ತಿದ್ದಂತೆಯೇ ಪ್ರಾಣ ಉಳಿಸಿಕೊಳ್ಳಲು ಜೆಸಿಬಿಯಿಂದ ಕೆಳಗೆ ಜಿಗಿದ ಕಾರ್ಮಿಕರು ಹತ್ತಿರದಲ್ಲಿದ್ದ ನೀರಿಗೆ ಬಿದ್ದಿದ್ದಾರೆ. ಆದರೆ ನೀರಿನಲ್ಲೂ ವಿದ್ಯುತ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಷ್ಟೊಂದು ಗಂಭೀರ ಘಟನೆ ನಡೆದಿದ್ದರೂ ಗಣಿಗಾರಿಕೆ ಮಾಲೀಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡದಿರುವುದು ಅನುಮಾನಕ್ಕೆ ಕಾರಣವಾಗಿದೆ. ಘಟನೆಯ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Related Articles

Back to top button