Belagavi NewsBelgaum NewsKannada NewsKarnataka NewsLatest

ಬೆಳಗಾವಿ ಬಳಿ ಭೀಕರ ಅಪಘಾತ: ಕೆ.ಎಸ್.ದೇಶಪಾಂಡೆ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಾನಾಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಾನೂನು ಸಲಹೆಗಾರ, ಹಿರಿಯ ವಕೀಲ ಮತ್ತು ಬ್ರಾಹ್ಮಣ ಸಮಾಜದ ಅಧ್ಯಕ್ಷ ಕೆ.ಎಸ್.ದೇಶಪಾಂಡೆ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.

ಕುಟುಂಬದ ಜೊತೆಗೆ 2 ದಿನಗಳ ದಾಂಡೇಲಿ ಪ್ರವಾಸಕ್ಕೆ ಹೊರಟಿದ್ದಾಗ ಕಾರು ಅಪಘಾತವಾಗಿದೆ. ಮಗ ಸಾಗರ್ ದೇಶಪಾಂಡೆ ಕಾರು ಚಲಾಯಿಸುತ್ತಿದ್ದರು. ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದಿದ್ದು, ಪತ್ನಿಯ ಪರಿಸ್ಥಿತಿಯೂ ಗಂಭೀರವಾಗಿದೆ. ಕಾರಿನಲ್ಲಿ 6-7 ಜನರಿದ್ದು, ಇತರರಿಗೂ ಗಾಯಗಳಾಗಿದ್ದು, ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

Related Articles

Back to top button