Belagavi NewsBelgaum NewsKannada NewsKarnataka NewsNational

*ಕೊಲೆ ಮಾಡಿ ಶವ ಬಸ್ ನಿಲ್ದಾಣದಲ್ಲಿ ಎಸೆದ ಆರೋಪಿಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಯುವಕನನ್ನು ಕೊಲೆ ಮಾಡಿ ಬಸ್ ನಿಲ್ದಾಣದಲ್ಲಿ ಆರೋಪಿಗಳು ಶವ ಎಸೆದು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ.

ಅನಂತಪುರ ಗ್ರಾಮದ ಚೆನ್ನಮ್ಮ ಸರ್ಕಲ್ ನಲ್ಲಿರುವ ಬಸ್ ನಿಲ್ದಾಣದಲ್ಲಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಅನಂತಪುರ ಗ್ರಾಮದ ಪಕ್ಕದಲ್ಲಿರುವ ಮದಭಾವಿ ಗ್ರಾಮದ ಅಪ್ಪಾಸಾಬ ಸಿದ್ದಪ್ಪ ಕಾಂಬಳೆ(37) ಮೃತ ದುರ್ದೈವಿಯಾಗಿದ್ದಾನೆ. ಅಥಣಿ ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

ಮೃತ ಅಪ್ಪಸಾಬ ನಿನ್ನೆ ಮಹಾರಾಷ್ಟ್ರಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದಾನೆ. ರಾತ್ರಿ ತನ್ನ ಹೆಂಡತಿಗೆ ಫೋನ್ ಕರೆ ಮಾಡಿ ಮಶೀನ್ ರಿಪೇರಿ ಇದೆ ಇವತ್ತು ಊರಿಗೆ ಬರಲು ಆಗುವುದಿಲ್ಲ ಎಂದು ತಿಳಿಸಿದ್ದಾನೆ. ಬೆಳಗಾಗುತ್ತಲೇ ಗಂಡ ಅಪ್ಪಾಸಾಬ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

Related Articles

Back to top button