Belagavi NewsBelgaum NewsKannada NewsKarnataka NewsLatest

*ಸುಟ್ಟು ಕರಕಲಾದ ಬೆಳಗಾವಿ ಕಡೆಯಿಂದ ಹೊರಟಿದ್ದ ಕಾರು*

ಪ್ರಗತಿವಾಹಿನಿ ಸುದ್ದಿ: ದಾಂಡೇಲಿ ತಾಲೂಕಿನ ನಾನಾಕೆಸರೋಡ್ ಗೆ ಬೆಳಗಾವಿ ಕಡೆಯಿಂದ ಹೊರಟಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಬೆಳಗಾವಿಯಿಂದ ದಾಂಡೇಲಿಗೆ ಹೊರಟ್ಟಿದ ಕಾರು ಸುಟ್ಟು ಕರಕಾಲಾಗಿದೆ. ಈ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಕೂಡಲೇ ಕಾರು ನಿಲ್ಲಿಸಿ ಹೊರಗಿಳಿದಿದ್ದಾರೆ. ಕ್ಷಣಾರ್ಧದಲ್ಲಿ ಕಾರು ಹೊತ್ತಿ ಉರಿದಿದೆ. ಕಾರು ಸಂಪೂರ್ಣ ಸುಟ್ಟು ಹೋಗಿದೆ. 

ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಅತಿಯಾದ ತಾಪಮಾನದಿಂದ ಇಂಜೀನ್ ಹೀಟ್ ಆಗಿ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.‌ ಈ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಲಾಗಿದೆ.

Home add -Advt

Related Articles

Back to top button