ಕಾಂಗ್ರೆಸ್ ಸಮಾವೇಶ ಹಠಾತ್ ಮುಂದಕ್ಕೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ. ಜನೆವರಿ 21ರಂದು ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿತ್ತು. ಸೋಮವಾರ ಬೆಳಗ್ಗೆಯಷ್ಟೆ ಈ ಸಮಾವೇಶದ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿವರ ಮಾಹಿತಿ ನೀಡಿದ್ದರು. ಎಐಸಿಸಿ ಅಧ್ಯಕ್ಷರೂ ಸಮಾವೇಶದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದರು. ಆದರೆ ಸಂಜೆ ಸಮಾವೇಶ ಮುಂದೂಡಿರುವ ಕುರಿತು ಅವರು ಪ್ರಕಟಣೆ ನೀಡಿದ್ದಾರೆ. ಸಮಾವೇಶ ನಡೆಸುವ ಮುಂದಿನ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು. ಈ ಹಿನ್ನೆಲೆಯಲ್ಲಿ ಈ ಸಮಾವೇಶ ನಡೆಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ … Continue reading ಕಾಂಗ್ರೆಸ್ ಸಮಾವೇಶ ಹಠಾತ್ ಮುಂದಕ್ಕೆ