Kannada NewsKarnataka NewsLatest
ಸವದತ್ತಿ ಬಳಿ ಸಿಡಿಲು ಬಡಿದು ಇಬ್ಬರ ಸಾವು

ಪ್ರಗತಿವಾಹಿನಿ ಸುದ್ದಿ, ಸವದತ್ತಿ – ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.
ಯರಗಟ್ಟಿ ತಾಲೂಕಿನ ಕೊಡ್ಲಿವಾಡದ ಹನುಮಂತ ಕಾರಬಾರಿ (19) ಹಾಗೂ ಮಾಡಮಗೇರಿ ಗ್ರಾಮದ ಹೊನ್ನಪ್ಪ ಮಬನೂರ (14) ಮೃತರು.
ವಿಧಾನಸಭಾ ಉಪಾಧ್ಯಕ್ಷ ಆನಂದ ಮಾಮನಿ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರಿಗೆ ಸರಕಾರದಿಂದ ಪರಿಹಾರ ಕೊಡಿಸಲು ಕ್ರಮ ತೆಗೆದುಕೊಂಡಿರುವುದಾಗಿ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಆಕ್ಸಿಜನ್ ಕೊರತೆ; ಡಾಕ್ಟರ್ ಸೇರಿ 8 ರೋಗಿಗಳ ಸಾವು




