Latest

ನಾಡಿನ ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ನಾಡಿನ ಖ್ಯಾತ ಕವಿ, ಹಿರಿಯ ಸಾಹಿತಿ ಎನ್.ಎಸ್.ಲಕ್ಷ್ಮಿನಾರಾಯಣ ಭಟ್ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ಬನಶಂಕರಿಯ ಮನೆಯಲ್ಲಿ ದೀರ್ಘಕಾಲದ ಅನಾರೋಗ್ಯದಿಂದಾಗಿ ಅವರು ಇಂದು ಬೆಳಗಿನಜಾವ ಕೊನೆಯುಸಿರೆಳೆದರು. 10.30ರ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

Home add -Advt

ಸಾಹಿತ್ಯದ ಬಹುತೇಕ ಎಲ್ಲ ಪ್ರಾಕಾರಗಳಲ್ಲೂ ಕೃಷಿ ಮಾಡಿದ್ದ ಲಕ್ಷ್ಮೀ ನಾರಾಯಣ ಭಟ್ ಅವರು, ಮೂಲತಃ ಶಿವಮೊಗ್ಗ ಜಿಲ್ಲೆಯವರು. 1936, ಅಕ್ಟೋಬರ್ 29ರಂದು ಜನಿಸಿದ್ದರು. 1974ರಲ್ಲೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.

 

Related Articles

Back to top button