Kannada NewsKarnataka NewsLatest

*ಪ್ರಾಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ: ನೊಂದ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪ್ರಾಧ್ಯಾಪಕರೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Home add -Advt

ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ (೨೩) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್‌ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಲಿಖಿತಾ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ. ಇವರ ಕಿರುಕುಳ ಮತ್ತು ಅಪಪ್ರಚಾರವೇ ನನ್ನ ಸಾವಿಗೆ ಕಾರಣ ಎಂದು ಅವರು ಬರೆದಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಧ್ಯಾಪಕ ರಾಜು, ಪತ್ನಿ ನಿಶಾ ಮತ್ತು ಡೆತ್ ನೋಟ್‌ನಲ್ಲಿ ಹೆಸರಿಸಲಾದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Related Articles

Back to top button