Kannada NewsKarnataka NewsNational

*ವೈಷ್ಣವಿದೇವಿ ದೇವಸ್ಥಾನದ ಅರ್ಚಕನ ಭೀಕರ ಕೊಲೆ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ಈಶ್ವರ ನಗರದಲ್ಲಿರುವ ವೈಷ್ಣವಿ ದೇವಸ್ಥಾನದ‌ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ನಡೆದಿದೆ. ಘಟನೆಯಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ.

Home add -Advt

ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಕೊಲೆಯಾದ ಅರ್ಚಕ. ದುಷ್ಕರ್ಮಿಗಳು ಚಾಕುವಿನಿಂದ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಅರ್ಚಕನ  ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿತ್ತು. ಅದೃಷ್ಟವಶಾತ್‌ ಆ ಸಮಯದಲ್ಲಿ ಅರ್ಚಕ ಬದುಕುಳಿದಿದ್ದರು ಎನ್ನಲಾಗಿದೆ. ಇಲ್ಲಿನ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಈಗಾಗಲೇ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ

Related Articles

Back to top button