Belagavi NewsBelgaum NewsKannada NewsKarnataka News

*ಕಳ್ಳನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಜನರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಟ್ಟಡವೊಂದರ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಿ ಆಟೊರಿಕ್ಷಾದಲ್ಲಿ ತೆಗೆದುಕೊಂಡು ಹೋಗುವ ವೇಳೆ ಕಳ್ಳನೋರ್ವ ಸಾರ್ವಜಮಿಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಜನರು ಕಳ್ಳನನ್ನು ಥಳಿಸಿರುವ ಘಟನೆ ನಡೆದಿದೆ.  

ಬೆಳಗಾವಿಯ ಬಾಂಧೂರ ಗಲ್ಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.‌ ಆದರೆ ಬೆಳಗಾವಿ ಮಾರ್ಕೆಟ್‌ ಠಾಣೆಯ ಪೊಲೀಸರು ಕಳ್ಳನನ್ನು ಬಿಟ್ಟು ಕಳಿಸಿದ್ದಾರೆ ಎನ್ನಲಾಗಿದೆ. ಕಳ್ಳನನ್ನು ಹಿಡಿದಾಗ ಜನರು ಸಿಟ್ಟಿಗೆದ್ದು ಥಳಿಸಿದ್ದರಿಂದ ಆತನಿಗೆ ಗಾಯಗಳಾಗಿವೆ.‌ ಬಳಿಕ ಜನರು ಪೊಲೀಸರಿಗೆ ಒಪ್ಪಿಸಿದ್ದಾರೆ.  ಆದರೆ ಮಾರ್ಕೇಟ್ ಠಾಣೆಯ ಪೊಲೀಸರು ಆತನ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಬಿಟ್ಟುಕಳಿಸಿದ್ದಾರೆ ಎಂದು ನಾಗರಿಕರು ದೂರಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button