
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯ ಮಚ್ಚೆ ಬಳಿಯ 2ನೇ ಪಡೆ ಕೆ.ಎಸ್.ಆರ್.ಪಿ ಅಧಿಕಾರಿ ವರ್ಗದಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಭಾಗವಹಿಸಿ, ಸಸಿ ನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ 2 ನೇ ಪಡೆಯ ಕೆ.ಎಸ್.ಆರ್.ಪಿ ಬೆಳಗಾವಿ ಕಮಾಂಡೆಂಟ್ ಹಂಜಾ ಹುಸೇನ್, ಸಹಾಯಕ ಕಮಾಂಡೆಂಟ್ ಹೇಮಂತ್ ಕುಮಾರ್, ಸಹಾಯಕ ಕಮಾಂಡೆಂಟ್ ಎನ್.ಪಿ. ಯಡಾಳ್, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಜಿನೇಶ್, ಪ್ರಶಾಂತ್, ಶ್ರೀಮಂತ, ಪಾಂಡಪ್ಪ, ಸುರೇಶ್ ಹಾಗೂ ಇಲಾಖೆಯ ಇತರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ