Kannada NewsKarnataka NewsLatest

48 ಗಂಟೆಯಲ್ಲಿ ಕಳ್ಳತನ ಭೇದಿಸಿದ ಪೊಲೀಸರು 

48 ಗಂಟೆಯಲ್ಲಿ ಕಳ್ಳತನ ಭೇದಿಸಿದ ಪೊಲೀಸರು

ಪ್ರಗತಿವಾಹಿನಿ ಸುದ್ದಿ, ಅಗಸಗಿ : ಬೆಳಗಾವಿ ತಾಲೂಕಿನ ಉಚಗಾವಿಯಲ್ಲಿ 2 ದಿನಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಮಾರು   2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಾಕತಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಅಕ್ಷಯ ಮನೋಹರ ಪಾವಶೆ (24) ಉಚಗಾವಿ ಗ್ರಾಮದ ಯುವಕ ಬಂಧಿತ. ಎರಡು ದಿನಗಳ ಹಿಂದೆ ಅದೇ ಗ್ರಾಮದ ಶಂಕರ ಮಹಾದೇವ ಪಾವಶೆ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿದ್ದ ಈತ ನಂತರ ತಲೆಮರಿಸಿಕೊಂಡಿದ್ದ. ಪ್ರಕರಣ ದಾಖಲಿಸಿಕೊಂಡು ಕಾಕತಿ ಪೋಲಿಸ್ ಠಾಣೆ ಪಿಐ ಶ್ರೀಶೈಲ ಕೌಜಲಗಿ ನೇತೃತ್ವದಲ್ಲಿ ಕಳ್ಳರ ಶೋಧ ನಡೆಸಿದ್ದ ಪೊಲೀಸರು ಮಂಗಳವಾರ ಸಂಶಯಾಸ್ಪದ ರೀತಿಯಲ್ಲಿ ಇದ್ದ ಅಕ್ಷಯನನ್ನು ಬಂಧಿಸಿದರು.
ವಿಚಾರಣೆ ನಡೆಸಿ ಈತನಿಂದ 30 ಗ್ರಾಂ ಚಿನ್ನದ ಹಾರ ಮತ್ತು 20 ಗ್ರಾಂ ನೆಕ್ಲೇಸ್ ಸೇರಿ ಒಟ್ಟು 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡು, ಪ್ರಕರಣ ದಾಖಲಿ ಆರೋಪಿಯನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button