Latest

ಕೊರೊನಾ ಲಸಿಕೆ ಹಾಕಿಸಿಕೊಂಡು ಧೈರ್ಯ ತುಂಬಿದ ಡಾ.ಎಂ.ಕೆ ಸುದರ್ಶನ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಮಹಾಮಾರಿ ಕೊರೊನಾಗೆ ಲಸಿಕೆ ಅಭಿಯಾನ ಆರಂಭವಾಗಿದ್ದು, ರಾಜ್ಯದಲ್ಲಿಯೂ ಕೂಡ ಲಸಿಕೆ ನೀಡಲಾಗುತ್ತಿದೆ. ಈ ನಡುವೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಸ್ವತ: ಲಸಿಕೆ ಹಾಕಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ.

ಈ ಕುರಿತು ಮಾತನಾಡಿರುವ ಡಾ.ಎಂ.ಕೆ ಸುದರ್ಶನ್, ನಾನು ಲಸಿಕೆ ಹಾಕಿಸಿಕೊಂಡಿದ್ದೇನೆ. ಲಸಿಕೆ ಬಗ್ಗೆ ಇರುವ ಅನುಮಾನ ದೂರವಾಗಲಿ ಎಂಬ ಕಾರಣಕ್ಕೆ ನಾನು ಲಸಿಕೆ ಹಾಕಿಸಿಕೊಂಡಿದ್ದು, ನನಗೆ ಯಾವುದೇ ಸಮಸ್ಯೆಯಿಲ್ಲ ಎಂದಿದ್ದಾರೆ.

ಧೈರ್ಯವಾಗಿ ಎಲ್ಲರೂ ಲಸಿಕೆ ಪಡೆಯಬಹುದಾಗಿದೆ. ಕೊರೊನಾ ಲಸಿಎಂ ಎಂಬುದು ಸಂಜೀವಿನಿಯಿದ್ದಂತೆ. ಅದಕ್ಕಾಗಿಯೇ ನಾನು ಲಸಿಕೆ ಪಡೆದುಕೊಂಡಿದ್ದು, ಕೋವಿಡ್ ಲಸಿಕೆ ಪಡೆದರೂ ನಿಯಮ ಪಾಲನೆ ಕಡ್ಡಾಯ ಎಂದಿದ್ದಾರೆ.

Home add -Advt

Related Articles

Back to top button