


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಪಠ್ಯ ಚಟುವಟಿಕೆಯಷ್ಟೇ ಕ್ರೀಡಾ ಚಟುವಟಿಕೆಗಳೂ ಮಕ್ಕಳಿಗೆ ಅವಶ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ, ಹರ್ಷ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಹಿರೇಬಾಗೇವಾಡಿ ಗ್ರಾಮದಲ್ಲಿ ಸೋಮವಾರ ಹರ್ಷ ಶುಗರ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ, ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಬಹುಮಾನಗಳನ್ನು ಘೋಷಿಸಿ ಅವರು ಮಾತನಾಡುತ್ತಿದ್ದರು.
ಸರ್ವತೋಮುಖ ಬೆಳವಣಿಗೆಗೆ ಮಾನಸಿಕ ಹಾಗೂ ದೈಹಿಕ ಎರಡೂ ಬೆಳವಣಿಗೆ ಅವಶ್ಯಕ. ಆದರೆ ದೈಹಿಕ ಚಟುವಟಿಕೆಗಳು ಇಂದಿನ ಮಕ್ಕಳಲ್ಲಿ, ಯುವ ಜನಾಂಗದಲ್ಲಿ ಕಡಿಮೆಯಾಗಿವೆ. ಹಾಗಾಗಿ ಶಿಕ್ಷಣ ತಜ್ಞರು, ಸಮಾಜದ ಮುಖಂಡರ ಜೊತೆ ಚರ್ಚಿಸಿ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಯುವಕರು ಇದರಲ್ಲಿ ಕೈ ಜೋಡಿಸುವ ಜೊತೆಗೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ವಿನಂತಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಕ್ರೀಡಾಪಟುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.