Belagavi NewsBelgaum News

*ಗಡಿಭಾಗದಲ್ಲಿ ಮತ್ತೆ ತಲ್ವಾ‌ರ್ ಸದ್ದು: ಯುವಕನ ಮೇಲೆ ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ಗಡಿಭಾಗದಲ್ಲಿ ಮತ್ತೆ ತಲ್ವಾ‌ರ್ ಸದ್ದು ಮಾಡಿದ್ದು ಓರ್ವ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಮೂವರು ಯುವಕರು ತಲ್ವಾ‌ರ್ ಮತ್ತು ಕುಡುಗೋಲಿನಿಂದ ಕೊಲೆ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೈಕ್ ರೇಸ್ ಸದ್ದು ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಕಾಂಗ್ರೆಸ್ ಮುಖಂಡನ ಕೊಲೆಗೆ ಸಂಚು ರೂಪಿಸಲಾಗಿತ್ತು ಎಂದು ತಿಳಿದು ಬಂದಿದೆ. ನಿನ್ನೆ ಸಾಯಂಕಾಲ ಮಾತಿಗೆ ಮಾತು ಬೆಳೆದು ಯುವಕರು ತಲ್ವಾರ್ ನಿಂದ ಹಲ್ಲೆ ಮಾಡಿದ್ದು, ಯುವಕ ಸೂರಜ್ ಅಬಾ ಕಾಂಬಳೆ (24) ಗಂಭೀರ ಗಾಯಗೊಂಡಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಅಥಣಿಯ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದ ಮೂವರು ಆರೋಪಿಗಳಾದ ವಿಶಾಲ ಸುರೇಶ ನಾಟೆಕ‌ರ್, ಅತುಲ ತಾತೋಬಾ ನಲವಡೆ, ಸೋಣ್ಯಾ ಹಿಮ್ಮತ ಶಿಂಧೆ ವಿರುದ್ದ ಅಥಣಿ ಪೊಲೀಸ್‌ ಠಾಣೆಯಲ್ಲಿ ಕೊಲೆ ಸಂಬಂಧಿತ ಕೇಸ್ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಈಗಾಗಲೆ ಓರ್ವನನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button