Kannada NewsKarnataka NewsLatest

ಜಾಲಿ ರೈಡ್ ಗೆ ಬಂದ ಬೈಕ್ ಸವಾರರಿಬ್ಬರ ದಾರುಣ ಅಂತ್ಯ

ಪ್ರಗತಿವಾಹಿನಿ ಸುದ್ದಿ, ದಾವಣಗೆರೆ: ಜಾಲಿರೈಡ್ ಗೆ ಕೇರಳದಿಂದ ಬಂದಿದ್ದ ಇಬ್ಬರು ಬೈಕ್ ಸವಾರರು ರಾಷ್ಟ್ರೀಯ ಹೆದ್ದಾರಿ 54ರಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಇಬ್ಬರೂ ಸವಾರಿ ಮಾಡುತ್ತಿದ್ದ ಹಿಮಾಲಯನ್ ಬೈಕ್ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಯಿತು. ಈ ವೇಳೆ ಸವಾರರಿಬ್ಬರೂ ರಸ್ತೆ ಮೇಲೆ ಬಿದ್ದರು. ಇದೇ ವೇಳೆ ಹೆದ್ದಾರಿಯಲ್ಲಿ ವೇಗದಲ್ಲಿ ಸಂಚರಿಸುತ್ತಿದ್ದ ಕಾರು ಇಬ್ಬರ ಮೇಲೆ ಹರಿದು ಇಬ್ಬರೂ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಕಾರಿನ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಎಸ್​ಪಿ ಉಮಾ ಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಾವಣಗೆರೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Home add -Advt

Related Articles

Back to top button