Kannada NewsKarnataka News

ಸುವರ್ಣವಿಧಾನಸೌಧ ಬಳಿ ಧರಣಿ ನಿರತ ಮಹಿಳಾ ಸಿಬ್ಬಂದಿ ಅಸ್ವಸ್ಥ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಸುವರ್ಣವಿಧಾನಸೌಧದ ಬಳಿ ಪ್ರತಿಭಟನಾರ್ಥವಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರಾಜ್ಯರಸ್ತೆ ಸಾರಿಗೆ ಸಂಸ್ಥೆಯ ಮಹಿಳಾ ಸಿಬ್ಬಂದಿ ಅಸ್ವಸ್ಥರಾಗಿದ್ದಾರೆ.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನಾ ಟೆಂಟ್ ನಲ್ಲಿ ಕೆಎಸ್ಆರ್ ಟಿಸಿ ಸಿಬ್ಬಂದಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.  ಅವರ ಪೈಕಿ ಜಯಶ್ರೀ ಎನ್ನುವ ಸಿಬ್ಬಂದಿ ಮಂಗಳವಾರ ತಡ ರಾತ್ರಿ ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಅಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಜಿಲ್ಲಾ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ದಾಖಲಿಸಿಕೊಂಡು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
https://pragati.taskdun.com/d-k-sivakumar-siddaramaiah-who-had-darshan-of-malikarani-devi/

Related Articles

Back to top button