
ಪ್ರಗತಿವಾಹಿನಿ ಸುದ್ದಿ: ರಂಗಭೂಮಿ ಯುವ ಕಲಾವಿದ, ಕಿರುಚಿತ್ರ ನಟ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮುರಳಿ ಆತ್ಮಹತ್ಯೆಗೆ ಶರಣಾದ ರಂಗಭೂಮಿ ಕಲಾವಿದ. ಮುರಳಿ ಅವರ ಮೃತದೇಹ ಬೆಂಗಳೂರಿನ ಸಾರಕ್ಕಿ ಬಳಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುರಳಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಕೆಲ ಕಿರುಚಿತ್ರಗಳಲ್ಲಿಯೂ ಅಭಿನಯಿಸಿದ್ದರು. ಮುರಳಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




