Karnataka NewsLatest

*ಮನೆಗಳ್ಳತನಕ್ಕೆ ಸಾಥ್ ನೀಡಿದ್ದ ಹೆಡ್ ಕಾನ್ಸ್ ಟೇಬಲ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಮನೆಗಳ್ಳತನ ಮಾಡುತ್ತಿದ್ದ ಕಳ್ಳರಿಗೆ ಸಾಥ್ ನೀಡಿದ್ದ ಹೆಡ್ ಕಾನ್ಸ್ ಟೇಬಲ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ರಾಜು ಬಂಧಿತ ಹೆಡ್ ಕಾನ್ಸ್ ಟೇಬಲ್. ಮೈಸೂರಿನ ಅಶೋಕಪುರಂ ಠಾಣೆಯ ಹೆಡ್ ಕಾನ್ಸ್ ಟೇಬಲ್ ಕಳ್ಳರ ಜೊತೆ ಸೇರಿ ಮನೆಗಳ್ಳರಿಗೆ ಸಾಥ್ ನೀಡಿದ್ದ.

ಮೈಸೂರಿನ ವಿವಿಧೆಡೆ 400 ಗ್ರಾಂ ಚಿನ್ನ ಕದ್ದು ಸಿಕ್ಕಿ ಬಿದ್ದಿದ್ದ ನಜರುಲ್ಲಾ ಬಾಬು ಹಾಗೂ ಅಲೀಂ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹೆಡ್ ಕಾನ್ಸ್ ಟೇಬಲ್ ರಾಜು ಬಗ್ಗೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಡ್ ಕಾನ್ಸ್ ಟೇಬಲ್ ರಾಜುನನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

Related Articles

Back to top button