Belagavi NewsBelgaum NewsCrimeKannada NewsKarnataka NewsNationalPolitics

*ಮನೆಗಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಶಿಂದೋಳ್ಳಿ ಗ್ರಾಮದ ಮಹಾಲಕ್ಷ್ಮೀಪುರಂ ನಗರದಲ್ಲಿರುವ ಮನೆಯ ಬಾಗಿಲು ಮುರಿದು 42 ಗ್ರಾಂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಮಾರಿಹಾಳ ಪೊಲೀಸ ಠಾಣೆ ಅಪರಾಧ ಸಂಖ್ಯೆ: 59/2026 ಕಲಂ: 305, 331(3) ಬಿಎನ್‌ಎಸ್-2023 ನೇ ಪ್ರಕರಣದಲ್ಲಿ ದಾಖಲಾಗಿ ತನಿಖೆ ನಡೆಸಲಾಗಿತ್ತು.

ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಳುವಾದ ವಸ್ತುಗಳು ಹಾಗೂ ಆರೋಪಿತರ ಪತ್ತೆ ಕುರಿತು ಈ ಪ್ರಕರಣದ ಪತ್ತೆಗಾಗಿ ಒಂದು ತಂಡವನ್ನು ರಚಿಸಿ ತನಿಖೆಯನ್ನು ಆರಂಭಿಸಿ ಆರೋಪಿ ವಿಶ್ವನಾಥ ದುರ್ಗಪ್ಪ ಮುತ್ತೂರ (26) ಎಂಬಾತನನ್ನು ಬಂಧಿಸಲಾಗಿದೆ.

ಈ ಆರೋಪಿ ವಿರುದ್ಧ ಮಾರಿಹಾಳ ಪೊಲೀಸ ಠಾಣೆಯ 3 ಪ್ರಕರಣಗಳು ಹಾಗೂ 1 ಕಾಕತಿ ಪೊಲೀಸ ಠಾಣೆ ಮನೆ ಕಳ್ಳತನ ಪ್ರಕರಣದಲ್ಲಿ ಬಾಗಿಯಾಗಿದ್ದು ತನಿಖೆಯಲ್ಲಿ ಬಯಲಾಗಿದೆ.

Home add -Advt

ಆರೋಪಿಯಿಂದ ಸುಮಾರು 23,00,000 ರೂ ಬೆಲೆಯ 134 ಗ್ರಾಂ ಬಂಗಾರದ ಆಭರಣಗಳು ಮತ್ತು 510 ಗ್ರಾಂ ಬೆಳ್ಳಿಯ ಆಭರಣಗಳನ್ನು ಜಪ್ತ ಮಾಡಿ ನ್ಯಾಯಾಲಯಕ್ಕೆ ಹಾಜರಪಡಿಸಲಾಗಿದೆ.

Related Articles

Back to top button