ದೇವಸ್ಥಾನದ ಕೀಲಿ ಮುರಿದು ಚಿನ್ನಾಭರಣ ಕದ್ದು ಪರಾರಿಯಾದ ಕಳ್ಳರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ವಾರಿಮಾಸ್ತಿಹೊಳ್ಳಿಯ ಪ್ರಸಿದ್ದ ಲಕ್ಷ್ಮೀದೇವಿಯ ಗುಡಿಯ ಲಾಕ್ ಮುರಿದು ಒಳನುಗ್ಗಿದ ಕಳ್ಳರು 1.40 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ. ಸೋಮವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ದೇವಿಯ ಕೊರಳಿನಲ್ಲಿರುವ ಬಂಗಾರ ಬೋರಮಾಳ, ಎಕ್ಸರಾ ಸರ ಎರಡು, ಬೆಳ್ಳಿಯ ಕುದುರೆ ಒಂದು, ಒಂದೂವರೆ ಕೆಜಿ ಬೆಳ್ಳಿಯ ದೇವಿಯ ಮುಖವಾಡ, 500 ಗ್ರಾಂ ದೇವಿಯ ಕಿರೀಟ ಕಳವಾಗಿದೆ. ಯಮಕನಮರಡಿ ಪಿಎಸ್‌ಐ ಶಿವು ಮನ್ನಿಕೇರಿ ಭೇಟಿ ಪರಿಶೀಲನೆ ನಡೆಸಿದ್ದು … Continue reading ದೇವಸ್ಥಾನದ ಕೀಲಿ ಮುರಿದು ಚಿನ್ನಾಭರಣ ಕದ್ದು ಪರಾರಿಯಾದ ಕಳ್ಳರು