
*ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮೈಸೂರು ದಸರಾ ಆಚರಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:*
ದಕ್ಷಿಣ ಭಾರತದ ಎಲ್ಲ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ.
ರಾಜ್ಯಗಳ ಕಲಾತಂಡಗಳ ಪ್ರದರ್ಶನ ನೀಡಲು ಆಹ್ವಾನಕ್ಕೆ ನಿರ್ಧಾರ.
ಏರ್ ಷೋ ನಡೆಸುವ ಬಗ್ಗೆ ಕೇಂದ್ರ ರಕ್ಷಣಾ ಸಚಿವರ ಜೊತೆ ಸಿಎಂ ಚರ್ಚೆ
ಏರ್ ಷೋ, ಭೂ ಸೇನೆ, ವಾಯುಸೇನೆ ಹಾಗೂ ನೌಕಾಪಡೆಗಳಿಂದ ಟ್ಯಾಬ್ಲೋದಲ್ಲಿ ಹಾಗೂ ಕವಾಯತಿನಲ್ಲಿ ಭಾಗವಹಿಸಲು ತಂಡಗಳನ್ನು ಕಳುಹಿಸುವಂತೆ ಮನವಿ.
ದಸರಾದಲ್ಲಿ ಟಿಕೆಟ್ ಪಡೆದವರಿಗೆ ಸೂಕ್ತ ಆಸನ ವ್ಯವಸ್ಥೆಗೆ ಆದ್ಯತೆ ನೀಡಲು ಸೂಚನೆ.
ವಿವಿಧ ದೇಶಗಳ ರಾಯಭಾರಿಗಳು, ಅಧಿಕಾರಿಗಳನ್ನು ಆಹ್ವಾನಿಸಲು ಸೂಚನೆ
ಚಿತ್ರಸಂತೆ, ಫ್ಲೀ ಮಾರ್ಕೆಟ್, ವಿಂಟೇಜ್ ಕಾರ್ ರ್ಯಾಲಿ, ರಂಗೋಲಿ ಸ್ಪರ್ಧೆ ಮತ್ತಿತರ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚನೆ.
ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ, ಕಾರ್ಯಕ್ರಮಗಳ ಮೇಲ್ವಿಚಾರಣೆಗೆ ಪ್ರತಿ ದಿನ ಒಬ್ಬ ಸಚಿವರನ್ನು ನಿಯೋಜಿಸಲು ನಿರ್ದೇಶನ.
ಡ್ರೋನ್ ಷೋ ಆಯೋಜಿಸಲು ಉದ್ದೇಶಿಸಿದೆ.
ಭಾರತೀಯ ಸೇನಾಪಡೆಗಳು, ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಚಲನಚಿತ್ರ ವಾಣಿಜ್ಯ ಮಂಡಳಿ, ಇಸ್ರೋ, ಡಿ.ಆರ್. ಡಿ. ಓ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳನ್ನು ಆಹ್ವಾನ.
ರಾಜ್ಯದ ಎಲ್ಲ ಭಾಗಗಳನ್ನು ಪ್ರತಿನಿಧಿಸುವ ಕಲಾ ತಂಡಗಳಿಗೆ ಅವಕಾಶ ನೀಡಲು ಸೂಚನೆ.
ಮೈಸೂರಿನ ಅರಮನೆ ಮತ್ತಿತರ ಪ್ರಮುಖ ತಾಣಗಳ ಕುರಿತು ಕಿರುಚಿತ್ರ ನಿರ್ಮಿಸಿ, ವ್ಯಾಪಕ ಪ್ರಚಾರ ನೀಡಲು ಸೂಚಿಸಿದರು.




