Latest

ಹುಬ್ಬಳ್ಳಿ; ಸ್ಪಾರ್ಕ್ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ ಕೇಸ್; ಮ್ಯಾನೇಜರ್ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ; ತಾರಿಹಾಳ ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮ್ಯಾನೇಜರ್ ರನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ತಾರಿಹಾಳದಲ್ಲಿ ಬರ್ತಡೆ ಕೇಕ್ ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಕಾರ್ಖಾನೆ ಘಟಕದಲ್ಲಿ ನಿನ್ನೆ ಬೆಂಕಿ ಅವಘಡ ಸಂಭವಿಸಿ, 8 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳಲ್ಲಿ ಮೂವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಪ್ರಕರಣ ಸಂಬಂಧ ಇದೀಗ ಕಾರ್ಖಾನೆ ಮ್ಯಾನೇಜರ್ ಮಂಜುನಾಥ್ ಅವರನ್ನು ಹುಬ್ಬಳ್ಳಿ ಪೊಲಿಸರು ಬಂಧಿಸಿದ್ದಾರೆ.

ಕಾರ್ಖಾನೆ ಮಾಲೀಕ ಅಬ್ದುಲ್ ಖಾದಿರ್ ಶೇಖ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದ ಮಹಿಳೆ ವಿಜಯಲಕ್ಷ್ಮಿ ಪತಿ ವೀರಭದ್ರ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಾಗಿದ್ದು, ಮ್ಯಾನೇಜರ್ ಅವರನ್ನು ಬಂಧಿಸಲಾಗಿದೆ.
ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಮೂವರ ಸಾವು

https://pragati.taskdun.com/latest/electrick-bikefiremandya/

Home add -Advt

Related Articles

Back to top button