Latest

ಗಣಪತಿ ವಿಸರ್ಜನೆ ವೇಳೆ ದುರಂತ; ಮೂವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ತಡರಾತ್ರಿ ಗಣಪತಿ ವಿಸರ್ಜನೆ ಮಾಡುವ ವೇಳೆ ದುರಂತ ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗಣಪತಿ ವಿಸರ್ಜಿಸಿ ಬರುವಾಗ ಈ ದುರಂತ ಸಂಭವಿಸಿದ್ದು, ಟ್ರ್ಯಾಕ್ಟರ್ ನಲ್ಲಿ ಪೆಂಡಾಲ್ ಗೆ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ.

Home add -Advt

ರಾಜು (47), ಪಾರ್ವತಿ(35) ಹಾಗೂ ರಚನಾ(28) ಮೃತರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ವಿಮಾನದಲ್ಲಿ ಬೆಳಗಾವಿಗೆ 12 ಗಂಟೆಗೆ ಉಮೇಶ ಕತ್ತಿ ಪಾರ್ಥಿವ ಶರೀರ ; ವಿಮಾನ ನಿಲ್ದಾಣದಿಂದ ಮೆರವಣಿಗೆಯಲ್ಲಿ ಹುಟ್ಟೂರಿಗೆ; BJP ಜನೋತ್ಸವ ಮುಂದೂಡುವ ಸಾಧ್ಯತೆ

https://pragati.taskdun.com/latest/to-belgaum-by-special-flight-umesh-katthis-mortal-remains-will-be-taken-in-a-procession-from-sambra-airport/

Related Articles

Back to top button