Kannada NewsLatest

ಒಂದೇ ಕುಟುಂಬದ ಮೂವರ ಆತ್ಮಹತ್ಯೆ; ಜೀವನ್ಮರಣದ ನಡುವೆ ಮೊಮ್ಮಗಳ ಹೋರಾಟ

ಪ್ರಗತಿವಾಹಿನಿ ಸುದ್ದಿ; ರಾಮನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ನಡೆದಿದೆ.

ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇವರಲ್ಲಿ ಓರ್ವ ಬಾಲಕಿ ಬದುಕುಳಿದಿದ್ದಾರೆ. ಮೂವರು ಮೃತಪಟ್ಟಿದ್ದಾರೆ.

55 ವರ್ಷದ ಸಿದ್ದಮ್ಮ, 30 ವರ್ಷದ ಮಗಳು ಸುಮಿತ್ರಾ, 35 ವರ್ಷದ ಅಳಿಯ ಹನುಮಂತ ರಾಜು ಮೃತರು. 11 ವರ್ಷದ ಮೊಮ್ಮಗಳು ಕೀರ್ತನಾ ಸ್ಥಿತಿ ಗಂಭೀರವಾಗಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾಳೆ.

ಕೆಲ ಮಾಹಿತಿ ಪ್ರಕಾರ ಹನುಮಂತ ರಾಜು ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಅಂತೆಯೇ ಇಂದು ಕೂಡ ಕುಡಿದು ಮನೆಯವರೊಂದಿಗೆ ಜಗಳ ಮಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಆತ್ಮಹತ್ಯೆವರೆಗೂ ಹೋಗಿದೆ. ವಿಷಯ ಗಂಭೀರವಾಗುತ್ತಿದ್ದಂತೆ ಸುಮಿತ್ರಾಳ ಮತ್ತೋರ್ವ ಮಗಳು ಚಂದನಾ ಓಡಿ ಹೋಗಿ ಗ್ರಾಮಸ್ಥರನ್ನು ಕರೆ ತಂದಿದ್ದಾಳೆ. ಅಷ್ಟರಲ್ಲಿ ಮೂವರು ಸಾವನ್ನಪ್ಪಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಕೀರ್ತನಾಳನ್ನು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ ಬಂದ್ ಬೇಡ; ಸಚಿವ ಆರ್.ಅಶೋಕ್ ಮನವಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button