Kannada NewsKarnataka NewsLatest

ಸಮುದ್ರದಲ್ಲಿ ಕೊಚ್ಚಿಹೋದ ಮೂವರು ಯುವಕರು

ಪ್ರಗತಿವಾಹಿನಿ ಸುದ್ದಿ : ಸಮುದ್ರದಲ್ಲಿ ಆಟವಾಡುತ್ತಿದ್ದ ಮೂವರು ಯುವಕರು ಅಲೆಗಳ ರಭಸಕ್ಕೆ ಕೊಚ್ಚಿಹೋಗಿದ್ದಾರೆ.

ಮಂಗಳೂರಿನ ಪಣಂಬೂರು ಬೀಚಿನಲ್ಲಿ ಘಟನೆ ನಡೆದಿದ್ದು, ಯುವಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಮಿಲನ್(20), ಲಿಖಿತ್(18), ನಾಗರಾಜ್(24) ಎನ್ನುವ ಮೂವರು ಲೈಫ್ ಗಾರ್ಡ್ ಸೂಚನೆ ಧಿಕ್ಕರಿಸಿ ಸಮುದ್ರಕ್ಕೆ ಇಳಿದಿದ್ದರು. ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಮಿಲನ್, ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಲಿಖಿತ್ ಹಾಗೂ ಕಂಪನಿಯೊಂದರಲ್ಲಿ ಸೂಪರ್‌ವೈಸರ್ ಆಗಿದ್ದ ನಾಗರಾಜ್ ನಾಪತ್ತೆಯಾದ ಯುವಕರು.

ಮೀನುಗಾರರು ಹಾಗೂ ಜೀವರಕ್ಷಕ ದಳದಿಂದ ಶೋಧ ಕಾರ್ಯ ನಡೆಸುತ್ತಿದೆ. ಮುಳುಗು ತಜ್ಞರು ಹುಡುಕಾಟ ನಡೆಸುತ್ತಿದ್ದಾರೆ. ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button