Election NewsKannada NewsKarnataka NewsNationalPolitics

*ಉಪ ಚುನಾವಣೆಗೆ ಮೂರು ಕ್ಷೇತ್ರಗಳ ಟಿಕೆಟ್ ಘೋಷಣೆ: ಶಿಗ್ಗಾವಿಗೆ ಅಚ್ಚರಿ ಅಭ್ಯರ್ಥಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಉಪ ಚುನಾವಣೆಯ ಕಾವು ಹೆಚ್ಚಿದ್ದು, ಕಾಂಗ್ರೆಸ್ ಮೂರು ಕ್ಷೇತ್ರಗಳ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿದ್ದು, ಶಿಗ್ಗಾವಿಗೆ ಅಚ್ಚರಿ ಹೆಸರು ಘೋಷಣೆ ಮಾಡಲಾಗಿದೆ.

ನ.13 ರಂದು ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಚನ್ನಪಟ್ಟಣಲ್ಲಿ ದೋಸ್ತಿ ನಾಯಕರಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಸೇರಿದ ಯೋಗೇಶ್ವರಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಸಂಡುರಿಗೆ ಅನ್ನಪೂರ್ಣ ತುಕಾರಾಮಗೆ ಟಿಕೆಟ್ ನೀಡಲಾಗಿದೆ.‌ ಆದರೆ ಶಿಗ್ಗಾಂವ ಟಿಕೆಟ್ ಘೊಷಣೆ ಅಚ್ಚರಿಗೆ ಕಾರಣವಾಗಿದ್ದು, ಮಾಜಿ ಸಚಿವ ವಿನಯ್ ಕುಲರ್ಣಿ ಮಗಳು ವೈಶಾಲಿ ಕುಲಕರ್ಣಿಗೆ ಟಿಕೆಟ್ ನೀಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button