Kannada NewsKarnataka NewsLatest

*ಹುಲಿ ಉಗುರು ಕೇಸ್: ಅರಣ್ಯಾಧಿಕಾರಿಯೇ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣದಲ್ಲಿ ಸ್ವತ: ಅರಣ್ಯಾಧಿಕಾರಿಯೇ ಅರೆಸ್ಟ್ ಆಗಿರುವ ಘಟನೆ ನಡೆದಿದೆ.

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಪೆಂಡೆಂಟ್ ಹೊಂದಿದ್ದ ನಟರು, ನಿರ್ಮಾಪಕರು, ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳು ಸೇರಿದಂತೆ ಸಾಲು ಸಾಲು ಪ್ರಕರಣಗಳು ದಾಖಲಾಗುತ್ತಿದ್ದು, ಈಗ ಸ್ವತ: ಅರಣ್ಯಾಧಿಕಾರಿಯೇ ಬಂಧಿಸಲ್ಪಟ್ಟಿದ್ದಾರೆ.

ಚಿಕ್ಕಮಗಳೂರಿನ ಕಳಸದ ಡಿಆರ್ ಎಫ್ ಒ ದರ್ಶನ್ ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಫೋಟೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿಆರ್ ಎಫ್ ಒ ಗೆ ನೋಟಿಸ್ ನೀಡಿ ವಿಚಾರಣೆಗೆ ಹಜರಾಗುವಂತೆ ಸೂಚಿಸಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ಡಿಆರ್ ಎಫ್ ಒ ಹುದ್ದೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಅಮಾನತ್ತಾಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್ ಅವರನ್ನು ಚಿಕ್ಕಮಗಳೂರಿನ ಎನ್ ಆರ್ ಪುರದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button