*ಮುಳುಗಡೆಯಾದ ಸೇತುವೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್: ಎಸ್ ಪಿ* 

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಬೆಳಗಾವಿ ಜಿಲ್ಲೆಯಲ್ಲಿನ ಎಲ್ಲ ನದಿಗಳು ತುಂಬಿ‌ ಹರಿಯುತ್ತಿವೆ. ಇಲ್ಲಿಯವರೆಗೂ ಒಟ್ಟು 36 ಸೇತುವೆಗಳು ಮುಳುಗಡೆಯಾಗಿವೆ. ಮಹಾರಾಷ್ಟ್ರದ ಎಲ್ಲ ಸಂಪರ್ಕವನ್ನು ಬಂದ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಳುಗಡೆಯಾದ ಸೇತುವೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಳೆದ ಮೂರು ದಿನಗಳಿಂದ ನಾವು, ಜಿಲ್ಲಾಧಿಕಾರಿ, ಜಿಪಂ ಸಿಇಒ ನಿರಂತರವಾಗಿ ಹಾನಿಯಾದ ಕಡೆಗಳಲ್ಲಿ ಭೇಟಿ ನೀಡಿ ಪರಿಶೀಲನೆ … Continue reading *ಮುಳುಗಡೆಯಾದ ಸೇತುವೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್: ಎಸ್ ಪಿ*