Belagavi NewsBelgaum NewsKannada NewsKarnataka NewsLatestPolitics

*ಟ್ರ್ಯಾಕ್ಟರ್ ಅಪಘಾತದಲ್ಲಿ ಮೂವರು ಮಹಿಳೆಯರು ಸಾವು ಪ್ರಕರಣ; ಸರ್ಕಾರದಿಂದ ಪರಿಹಾರ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆ ಕಾಗವಾಡ ಬಳಿ ಸಂಭವಿಸಿದ ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟ ಮೂವರು ಮಹಿಳೆಯರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ಈ ಬಗ್ಗೆ ಸಚಿವ ಶಿವಾನಂದ ಪಾಟೀಲ ಮಾಹಿತಿ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ಮನವಿ ಮಾಡಿದಾಗ ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ ಎಂದು ತಿಳಿಸಿದರು.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಚಿವರು ಮೃತರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ
ಟ್ರ್ಯಾಕ್ಟರ್ ಅಪಘಾತ,ಮೂವರು ಮಹಿಳೆಯರು ಸಾವು,2 ಲಕ್ಷ ಪರಿಹಾರ ಘೋಷಣೆ


Related Articles

Back to top button