CrimeKannada NewsNational

*ಪಟಾಕಿ ಕಾರ್ಖಾನೆಯಲ್ಲಿ ದುರಂತ: ಮೃತರ ಸಂಖ್ಯೆ 25ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ರವಿವಾರ ತಮಿಳುನಾಡಿ ವಿರುಧುನಗರ ಜಿಲ್ಲೆಯ ಕತ್ತನಾರ್‌ಪಟ್ಟಿ ಬಳಿ ಇರುವ ಪಟಾಕಿ ಕಾರ್ಖಾನೆಯಲ್ಲಿನಡೆದ ಭೀಕರ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. 

ಪಟಾಕಿ ಘಟಕದಲ್ಲಿ ಭಾನುವಾರ ಈ ದುರಂತ ಸಂಭವಿಸಿದ್ದು ಮೃತಪಟ್ಟವರಲ್ಲಿ 22 ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನುಳಿದ ಎಂಟು ಮಂದಿ ಕಾರ್ಮಿಕರು ಶೇ. 60ರಷ್ಟು ಸುಟ್ಟಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ.

Home add -Advt

ಘಟನೆ ನಡೆದ ದಿನ ಸಂಜೆ ರಕ್ಷಣಾ ಕಾರ್ಯ ನಡೆಯುತ್ತಿದ್ದಾಗ ಸಂಭವಿಸಿದ ಎರಡನೇ ಸ್ಫೋಟದಲ್ಲಿ ಎಂಟು ಮಂದಿ ಪೊಲೀಸರು ಸೇರಿದಂತೆ ಒಟ್ಟು 12 ಮಂದಿಗೆ ಗಾಯಗಳಾಗಿವೆ. ಮಣ್ಣು ತೆಗೆಯುವ ಯಂತ್ರದ ಮೂಲಕ ಅವಶೇಷಗಳನ್ನು ತೆರವು ಮಾಡುತ್ತಿದ್ದಾಗ ಈ ಸ್ಪೋಟ ಸಂಭವಿಸಿದೆ. 

Related Articles

Back to top button