Latest

*ರೈಲು ಡಿಕ್ಕಿ: ಆರು ಆನೆಗಳ ದುರಂತ ಸಾವು*

ಪ್ರಗತಿವಾಹಿನಿ ಸುದ್ದಿ: ವನ್ಯಜೀವಿ ಅಭಯಾರಣ್ಯದ ಬಳಿ ಪ್ಯಾಸೆಂಜ‌ರ್ ರೈಲು ಆನೆಯ ಹಿಂಡಿಗೆ ಡಿಕ್ಕಿ ಹೊಡೆದು ಆರು ಆನೆಗಳು ಸಾವನ್ನಪ್ಪಿರುವ ದಾರುಣ ಘಟನೆ ಶ್ರೀಲಂಕಾದಲ್ಲಿ ನಡೆದಿದೆ.

ಶ್ರೀಲಂಕಾ ರಾಜಧಾನಿ ಕೊಲಂಬೊದಿಂದ ಸುಮಾರು 200 ಕಿಲೋಮೀಟರ್ ಮಿನ್ನೇರಿಯಾ ಬಳಿ ಈ ಘಟನೆ ನಡೆದಿದೆ. ನಾಲ್ಕು ಮರಿ ಆನೆಗಳು ಮತ್ತು ಎರಡು ವಯಸ್ಕ ಆನೆಗಳು ಸಾವನ್ನಪ್ಪಿವೆ.

ಕೌದುಲಾ ಹಾಗೂ ವಸಗಾಮುವಾ ನಡುವೆ ಸಂಪರ್ಕ ಕಲ್ಪಿಸುವ, ವನ್ಯಜೀವಿ ಸಂರಕ್ಷಿತಾರಣ್ಯದೊಳಗೆ ಹಾದುಹೋಗುವ ಈ ರೈಲು ಹಳಿಯಲ್ಲಿ ಗುರುವಾರ ರೈಲು ಸಂಚಾರದ ವೇಳೆ ಹಳಿ ಪಕ್ಕದಲ್ಲಿ ಸಂಚರಿಸುತ್ತಿದ್ದ ಆನೆಗಳ ಹಿಂಡಿಗೆ ಟ್ರೈನ್ ಡಿಕ್ಕಿ ಹೊಡೆದ ಪರಿಣಾಮ ಆರು ಆನೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button