
ಪ್ರಗತಿವಾಹಿನಿ ಸುದ್ದಿ: ರೈಲಿಗೆ ಸಿಲುಕಿ ಕಾಲೇಜು ವಿದ್ಯಾರ್ಥಿನಿ ಸಾವಿಗಿಡಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ತುಮಕೂರು ಜಿಲ್ಲೆ ತಿಪಟೂರು ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ವರ್ಷಿಣಿ ಟಿ ಎಸ್ (19) ಮೃತ ದುರ್ದೈವಿಯಾಗಿದ್ದು, ನಗರದ ಕಲ್ಪತರು ಕಾಲೇಜಿನಲ್ಲಿ ಬಿ ಎ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ದೇವರಹಳ್ಳಿ ನಿವಾಸಿ ಸುರೇಶ್ ಎಂಬುವರ ಪುತ್ರಿಯಾಗಿರುವ ವರ್ಷಿಣಿ, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.