*ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ಆಗಸ್ಟ್ ನಲ್ಲಿ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರನ್ನು ಮನವೊಲಿಸಿ ಬೇಡಿಕೆ ಈಡೇರಿಸುವ ಭರವಸೆ ಕೊಟ್ಟಿತ್ತು. ಆದರೆ ಈವರೆಗೆ ಸರ್ಕಾರ ಭರವಸೆ ಈಡೇರಿಸಿಲ್ಲ. ಇದರಿಂದ ಸಿಡಿದೆದ್ದಿರುವ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ನಿರ್ಧರಿಸಿದ್ದಾರೆ. ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ, ಎನ್ ಡಬ್ಲ್ಯೂ ಕೆ.ಎಸ್.ಆರ್.ಟಿ.ಸಿ. ಕೆ.ಕೆ.ಆರ್.ಟಿ.ಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಅಕ್ಟೋಬರ್ 15ರಿಂದ ಮುಷ್ಕರ ಆರಂಭಿಸಲಿದ್ದಾರೆ. ಮೊದಲ ಹಂತದಲ್ಲಿ … Continue reading *ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು*