Kannada NewsLatest

ಬೆಳಗಾವಿಯಲ್ಲಿ ಮುಷ್ಕರ ನಿರತ ಸಾರಿಗೆ ನೌಕರನಿಗೆ ಹೃದಯಾಘಾತ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸರಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ರಾಜ್ಯಾದ್ಯಂತ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಷ್ಕರ ವಾಪಸ್ ಪಡೆಯುವಂತೆ ಸರ್ಕಾರ ಮಾಡಿದ ಮನವಿಗೂ ಬಗ್ಗದೇ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ನಡುವೆ ಗಡಿಜಿಲ್ಲೆ ಬೆಳಗಾವಿಯಲ್ಲಿ ಕೂಡ ಸಾರಿಗೆ ನೌಕರರು ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದು, ಈ ವೇಳೆ ಸಾರಿಗೆ ನೌಕರನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮುಷ್ಕರದಲ್ಲಿ ಪಾಲ್ಗೊಂಡು ಆಗಷ್ಟೇ ಮನೆಗೆ ತೆರಳಿದ್ದ ದತ್ತಾ ಮಂಡೋಲ್ಕರ್ (58) ಎಂಬುವವರು ಹೃದಯಾಘತದಿದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button