Latest

ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಮುಷ್ಕರವನ್ನು ರಾಜ್ಯಾದ್ಯಂತ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುವ ಸಲುವಾಗಿ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಆಗಮಿಸಿದ್ದರು.

Home add -Advt

ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರು ಹಾಗೂ ರೈತ ಮುಖಂಡರ ಜೊತೆ ಸಭೆ ನಡೆಸುತ್ತಿದ್ದರು. ಸಭೆ ವೇಳೆಯೇ ಪೊಲೀಸರು ಕೋಡಿಹಳ್ಳಿಯವರನ್ನು ವಶಕ್ಕೆ ಪಡೆದಿದ್ದಾರೆ.

ಸ್ಯಾಂಪಲ್ ಟೆಸ್ಟ್ ಕೊಟ್ಟು ಶ್ರೀಶೈಲಂಗೆ ಪಾದಯಾತ್ರೆ ಹೊರಟ ಭಕ್ತರು; 7 ಜನರಲ್ಲಿ ಸೋಂಕು ಪತ್ತೆ

Related Articles

Back to top button