Latest

ಇದ್ದಕ್ಕಿದ್ದಂತೆ ನಾಪತ್ತೆಯಾದ ASI

ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಬೆಳಕಿಗೆ ಬಂದಿದೆ.

ಅರಕಲಗೋಡು ಮೂಲದ ಸುರೇಶ್ ಕುಶಾಲನಗರದಲ್ಲಿ ಟ್ರಾಫಿಕ್ ಎಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಏಕಾಏಕಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ಕೂಡ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿದ್ದು, ಅವರ ವಸತಿ ನಿಲಯಕ್ಕೂ ಬೀಗ ಹಾಕಲಾಗಿದೆ. ವಿಷಯ ತಿಳಿದು ಕುಶಾಲನಗರಕ್ಕೆ ಆಗಮಿಸಿರುವ ಎ ಎಸ್ ಐ ಸುರೇಶ್ ಪತ್ನಿ ಹಾಗೂ ಕುಟುಂಬದವರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ಅಧಿಕಾರಿಗೆ ಶೋಧ ನಡೆಸಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೇರಿದ ದಿನವೇ ಬಿತ್ತು ಕೇಸ್

Home add -Advt

Related Articles

Back to top button