Kannada NewsKarnataka NewsLatest
*ಚಿನ್ನಾಭರಣಗಳೊಂದಿಗೆ ಪ್ರಿಯಕರನೊಂದಿಗೆ ಎಸ್ಕೇಪ್ ಆದ ಪತ್ನಿ; ಇಬ್ಬರು ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಮನೆಯಲ್ಲಿದ್ದ ಚಿನ್ನಾಭರಣಗಳೊಂದಿಗೆ ಪ್ರಿಯಕರನ ಜೊತೆ ಪರಾರಿಯಾಗಿದ್ದು, ಇದರಿಂದ ಬೇಸತ್ತ ಪತಿ ತನ್ನ ಇಬ್ಬರು ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಲ್ಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅರ್ಚಕ ಶಿವಣ್ಣ ಇಬ್ಬರು ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದವನು. 10 ಹಾಗೂ 5 ವರ್ಷದ ಇಬ್ಬರು ಮಕ್ಕಳನ್ನು ಹತ್ಯೆಗೈದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಹಿಂದೆ ಪತ್ನಿ ಓಡಿಹೋಗಿದ್ದಾಗ ಶಿವಣ್ಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಇದಾದ ಬಳಿಕ ಆಕೆ ಮನೆಗೆ ವಾಪಾಸ್ ಆಗಿದ್ದಳು. ಆದರೆ ಮರುದಿನ ಶಿವಣ್ಣ ಕೆಲಸಕ್ಕೆ ಹೋದಾಗ ಚಿನ್ನಾಭರಣ ಸಮೇತ ಓಡಿಹೋಗಿದ್ದಾಳೆ. ಇದರಿಂದ ನೊಂದ ಶಿವಣ್ಣ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


