Kannada NewsKarnataka NewsLatest

*ನೀರಿಗೆ ಬಿದ್ದ ತಾಯಿ, ಮಕ್ಕಳನ್ನು ರಕ್ಷಿಸಲು ಹೋದ ವ್ಯಕ್ತಿಯೂ ನೀರುಪಾಲು; ನಾಲ್ವರು ದುರಂತ ಅಂತ್ಯ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಸಿದ್ಧಗಂಗಾ ಮಠದ ಬಳಿ ದುರಂತವೊಂದು ಸಂಭವಿಸಿದೆ. ನೀರಿಗೆ ಬಿದ್ದಿದ್ದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸಲು ಹೋದ ವ್ಯಕ್ತಿ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಸಿದ್ಧಗಂಗಾ ಮಠದ ಹಿಂಭಾಗದಲ್ಲಿರುವ ಗೋಕಟ್ಟೆಯಲ್ಲಿ ಈ ದುರಂತ ಸಂಭವಿಸಿದೆ. ದನಗಳು ನೀರು ಕುಡಿಯಲು ನಿರ್ಮಿಸಿರುವ ಹೊಂಡಕ್ಕೆ ಕಾಲು ತೊಳೆಯಲು ಇಳಿದಿದ್ದ ಬಾಲಕ ನೀರಿನಲ್ಲಿ ಮುಳುಗಿದ್ದಾನೆ. ಬಾಲಕನನ್ನು ರಕ್ಷಿಸಲು ಹೋದ ತಾಯಿ ಕೂಡ ನೀರು ಪಾಲಾಗಿದ್ದಾರೆ. ಈ ವೇಳೆ ತಾಯಿಯನ್ನು ರಕ್ಷಿಸಲು ಹೋದ ಮತ್ತೊಬ್ಬ ಮಗ ಕೂಡ ನೀರಿನಲ್ಲಿ ಮುಳುಗಿದ್ದಾನೆ. ತಾಯಿ ಹಾಗೂ ಇಬ್ಬರು ಮಕ್ಕಳು ನೀರಿನಲ್ಲಿ ಮುಳುತ್ತಿರುವುದನ್ನು ಕಂಡು ಅವರನ್ನು ರಕ್ಷಿಸಲು ಹೋದ ವ್ಯಕ್ತಿ ಮಹದೇವಪ್ಪ ಎಂಬುವವರು ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಒಬ್ಬರನ್ನು ರಕ್ಷಿಸಲು ಹೋಗಿ ನಾಲ್ವರು ನೀರುಪಾಲಾಗಿ ಸಾವನ್ನಪ್ಪಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button