Kannada NewsKarnataka NewsPolitics

*ಬಿಜೆಪಿಗೆ ಬಂದು ಡಿ.ಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ: ಪ್ರಲ್ಲಾದ್ ಜೋಶಿ ಹೇಳಿದ್ದೇನು.‌.?*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಗೆ ಬಂದು ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ, ಬಿ.ವೈ. ವಿಜಯೇಂದ್ರ ಉಪಮುಖ್ಯಮಂತ್ರಿ ಆಗುತ್ತಾರೆ ಎಂಬ ವದಂತಿಗಳ ಬಗ್ಗೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ. ಅಂತಹ ಯಾವುದೇ ಯೋಚನೆ ನಮ್ಮ ಪಕ್ಷದ್ದಲ್ಲಿ  ಇಲ್ಲ. ಇನ್ನು ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳಿದ್ದರೂ, ಜನಾದೇಶಕ್ಕೆ ಗೌರವ ನೀಡಿ, ಸರ್ಕಾರಕ್ಕೆ ಐದು ವರ್ಷಗಳ ಅವಧಿ ಪೂರ್ಣಗೊಳಿಸಲು ಅವಕಾಶ ನೀಡಬೇಕೆಂಬುದು ಬಿಜೆಪಿಯ ನಿಲುವು ಎಂದು ತಿಳಿಸಿದ್ದಾರೆ.

Home add -Advt

ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಉದ್ದೇಶ ಬಿಜೆಪಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ ಜೋಶಿ, ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ಯಾವುದೇ ಕಾರಣಕ್ಕೂ ಈ ಸರ್ಕಾರದ ಅಸ್ಥಿರತೆಯನ್ನು ನಾವು ಬಯಸುವುದಿಲ್ಲ. ಈ ಸರ್ಕಾರ ಐದು ವರ್ಷಗಳ ಕಾಲ ತಮ್ಮ ಅವಧಿಯನ್ನು ಮುಗಿಸಬೇಕು, ಇದೇ ನಮ್ಮ ಆಶಯ ಎಂದರು.

Related Articles

Back to top button