*ಈಜಲು ಹೋದ ಇಬ್ಬರು ಬಾಲಕರು ನೀರು ಪಾಲು*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಈಜಲು ಹೋದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ. ರಾಕೇಶ್ (14) ಹಗೂ ಧನುಷ್ (15) ಮೃತರು. ಭಾನುವಾರ ರಜಾ ದಿನ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಬಾಲಕರು ಈಜಲು ಹೋಗಿದ್ದಾರೆ. ಈ ವೇಳೆ ಈ ದುರಂತ ಸಂಭವಿಸಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಇಂದು ಮಧ್ಯರಾತ್ರಿಯಿಂದಲೇ ಖಾಸಗಿ ಸಾರಿಗೆ ಸಂಚಾರ ಬಂದ್; ಶಾಲಾ ಮಕ್ಕಳು, ಸಾರ್ವಜನಿಕರಿಗೆ ತಟ್ಟಲಿದೆ ಮುಷ್ಕರದ ಬಿಸಿ*