Kannada NewsKarnataka NewsLatest

*ಬೆಂಕಿ ದುರಂತ; 9 ಹಸುಗಳು, 20 ಮೇಕೆಗಳು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ತುಮಕೂರು: ಜಾನುವಾರುಗಳನ್ನು ಕಟ್ಟಿದ್ದ ಕೊಟ್ಟಿಗೆಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, 9 ಹಸುಗಳು, 20 ಮೇಕೆಗಳು ಸಜೀವದಹನಗೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಕಾರನಹಳ್ಳಿಯಲ್ಲಿ ನಡೆದಿದೆ.

ಕಾರನಹಳ್ಳಿಯ ಚಿಕ್ಕಣ್ಣ ಎಂಬುವವರಿಗೆ ಸೇರಿದ ಕೊಟ್ಟಿಗೆ ಇದಾಗಿದ್ದು, ಏಕಾಏಕಿ ಬೆಂಕಿ ಅವಘಡ ಸಂಭವಿಸಿದೆ. ಕೊಟ್ಟಿಗೆಯಲ್ಲಿದ್ದ 9 ಹಸುಗಳು, 20 ಮೇಕೆಗಳು ಸುಟ್ಟುಕರಕಲಾಗಿವೆ. 4-5 ಜಾನುವಾರುಗಳನ್ನು ರಕ್ಷಿಸಲಾಗಿದೆ.

ಬೆಂಕಿ ಅವಘಡದಲ್ಲಿ ಅಪಾರ ಪ್ರಮಾಣದ ಅಡಿಕೆ, ಒಂದು ಟ್ರ್ಯಾಕ್ಟರ್ ಕೂಡ ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ಬಂದು ಬೆಂಕಿಯನ್ನು ನಂದಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button