Belagavi NewsBelgaum NewsCrimeKarnataka NewsNationalPolitics

*ಗಾಂಜಾ ಸೇವಿಸುತ್ತಿದ್ದ ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ತಿಲಕವಾಡಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುವ ವೇಳೆ ಗಾಂಜಾ ಸೇವಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿರಾಜ ಪಿರಾಜಿ ಕಂಗ್ರಾಳಕರ (29) ಹಾಗೂ ಸುನೀಲ ಬೈರು ಅಸಲಕರ (26) ಇವರಿಬ್ಬರೂ ಬೆಳಗಾವಿಯ ತಿಲಕವಾಡಿಯ ಇಂದ್ರಪ್ರಸ್ಥ ನಗರ, ಜಕ್ಕಿನ ಹೊಂಡದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ ಬಗ್ಗೆ ಕಂಡು ಬಂದಾಗ ಹಿಡಿದು ವಿಚಾರಣೆ ನಡೆಸಲಾಗಿದೆ.

ಈ ವೇಳೆ ಗಾಂಜಾ ಸೇವನೆ ಮಾಡಿರುವ ಬಗ್ಗೆ ಅನುಮಾನಗೊಂಡ ಪಿಎಸ್ಐ ವಿಶ್ವನಾಥ ಘಂಟಾಮಠ ಸಿಬ್ಬಂದಿಯವರು ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಅವರ ವಿರುದ್ಧ ತಿಲಕವಾಡಿ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ.17/2026 ಕಲಂ.27(b) ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.

Home add -Advt

Related Articles

Back to top button