Kannada NewsKarnataka NewsLatest

*BREAKING: ಎರಡು ಬಿಎಂಟಿಸಿ ಬಸ್ ಗಳ ನಡುವೆ ಭೀಕರ ಅಪಘಾತ: ಚಾಲಕನ ಸ್ಥಿತಿ ಗಂಭೀರ: ಡ್ರೈವರ್ ಸೀಟ್ ಅಡಿ ಕಾಲು ಸಿಲುಕಿ ಹೊರಬರಲಾಗದೇ ಮಹಿಳೆಯ ಪರದಾಟ*

ಪ್ರಗತಿವಾಹಿನಿ ಸುದ್ದಿ: ಎರಡು ಬಿಎಂಟಿಸಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಬಸ್ ಡ್ರೈವರ್ ಸೀಟ್ ಅಡಿಯಲ್ಲಿ ಮಹಿಳೆಯೊಬರ ಕಾಲು ಸಿಲುಕ್ಕೊಂಡಿದ್ದು, ಹೊರಬರಲಾಗದೇ ಮಹಿಳೆ ಪರದಾಡುತ್ತಿರುವ ಘಟನೆ ನಡೆದಿದೆ.

ಬೆಂಗಳೂರಿನ ಕೆ.ಆರ್. ವೃತ್ತದಲ್ಲಿ ಈ ಘಟನೆ ನಡೆದಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಬಿಎಂಟಿಸಿ ವಾಯುವಜ್ರ ಬಸ್ ಗೆ ಹಿಂಬದಿಯಿಂದ ಬಂದ ಮತ್ತೊಂದು ಬಿರೆಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬಸ್ ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಚಾಲಕನ ಸ್ಥಿತಿ ಗಂಭೀರವಾಗಿದೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಬಸ್ ಚಾಲಕನ ಹಿಂಬದಿ ಸೀಟ್ ಕೆಳಗೆ ಮಹಿಳೆಯೊಬ್ಬರು ಸಿಲುಕಿಕೊಂಡಿದ್ದಾರೆ. ಮಹಿಳೆಯ ಕಾಲು ಮಾತ್ರ ಸಿಕ್ಕಿಕೊಂಡಿದ್ದು, ಆಕೆಯನ್ನು ರಕ್ಷಿಸಲು ಸ್ಥಳೀಯರು ಹಾಗೂ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Home add -Advt

Related Articles

Back to top button