Kannada NewsKarnataka NewsLatest

*ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಡೆದಿದೆ.

ಕಾನ್ಸ್ ಟೇಬಲ್ ಗಳಾದ ಇಸ್ಮಾಯಿಲ್, ರೇವಣ ಸಿದ್ಧ ಅಮಾನತು. ಇಬ್ಬರೂ ಸಿರವಾರ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗಳು. ರಾತ್ರಿ ಪಾಳಿಯಲ್ಲಿ ಕರ್ತವ್ಯ ಲೋಪವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಇಬ್ಬರು ಪಿಸಿಗಳನ್ನು ಅಮಾನತುಗೊಳಿಸಿ ರಾಯಚೂರು ಎಸ್ ಪಿ ಬಿ.ನಿಖಿಲ್ ಆದೇಶ ಹೊರಡಿಸಿದ್ದಾರೆ.

Related Articles

Back to top button