Kannada NewsKarnataka News

ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರ ಸಾವು

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸಾವನಪ್ಪಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕಣಿವೇನಹಳ್ಳಿ ಗೇಟ್ ಬಳಿ ನಡೆದಿದೆ.

ಧನಂಜಯ (58) ಹಾಗೂ ಶ್ರೀಕೃಷ್ಣ (49) ಘಟನೆಯಲ್ಲಿ ಮೃತಪಟ್ಟಿದ್ದಾರೆ. ನರಸಿಂಹ ಮತ್ತು ವೆಂಕಟಾಚಲಪತಿಗೆ ಗಂಭೀರ ಗಾಯವಾಗಿದೆ. ತುಮಕೂರಿನಿಂದ ಮದುವೆ ಆರತಕ್ಷತೆ ಕಾರ್ಯಕ್ರಮ ಮುಗಿಸಿ ಪಾವಗಡಕ್ಕೆ ವಾಪಸ್‌ ಹೋಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.

Home add -Advt

ಮೃತರು ಸೇರಿದಂತೆ ಕಾರಿನಲ್ಲಿದ್ದ 4 ಜನರು ಶಿಕ್ಷಕರಾಗಿ ಸೇವೆ ಸಲ್ಲಿಸುತಿದ್ದರು. ಘಟನೆ ಸಂಬಂಧ ಪಾವಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button