Kannada NewsLatestNational

*ಬಾಲಕರನ್ನು ಕಟ್ಟಿಹಾಕಿ ಮೂತ್ರ ಕುಡಿಸಿ, ಗುಪ್ತಾಂಗಕ್ಕೆ ಮೆಣಸಿನಕಾಯಿ ಹಾಕಿ ಪೆಟ್ರೋಲ್ ಇಂಜಕ್ಷನ್ ಕೊಟ್ಟ ಕಿರಾತಕರು*

ಪ್ರಗತಿವಾಹಿನಿ ಸುದ್ದಿ; ಲಖನೌ: ಕೋಳಿ ಕದ್ದಿರುವ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ಹಿಡಿದು ಮೂತ್ರ ಕುಡಿಸಿ, ಗುಪ್ತಾಂಗಕ್ಕೆ ಮೆಣಸಿನಕಾಯಿ ಉಜ್ಜಿ ಅಟ್ಟಹಾಸ ಮೆರೆದಿರುವ ಘಟನೆ ಉತ್ತರ ಪ್ರದೇಶದ ದಮರಿಯಾಗಂಜ್ ತಹಶಿಲ್ ನ ಸಿದ್ಧಾರ್ಥ್ ನಗರದಲ್ಲಿ ನಡೆದಿದೆ.

ಇಬ್ಬರು ಬಾಲಕರು ಹಣ ಹಾಗೂ ಕೋಳಿಗಳನ್ನು ಕದಿಯುತ್ತಿದ್ದರು ಎಂಬ ಆರೋಪದ ಮೇರೆಗೆ ಕೋಳಿ ಫಾರಂ ನಿರ್ವಾಹಕರು ಈ ರೀತಿ ಅಮಾನವೀಯವಗಿ ನಡೆದುಕೊಂಡಿದ್ದಾರೆ. ಮಕ್ಕಳನ್ನು ಕಂಬಕ್ಕೆ ಕಟ್ಟಿಹಾಕಿ ಬಲವಂತವಾಗಿ ಮೂತ್ರ ಕುಡಿಸಿ, ಗುಪ್ತಾಂಗಕ್ಕೆ ಮೆಣಸಿನಕಾಯಿ ಉಜ್ಜಿ, ಸೊಂಟಕ್ಕೆ ಪೆಟ್ರೋಲ್ ಇಂಜಕ್ಷನ್ ಕೊಟ್ಟು ಕ್ರೌರ್ಯ ಮೆರೆದಿದ್ದಾರೆ.

ಪೆಟ್ರೋಲ್ ರಕ್ತದೊಳಗೆ ಸೇರಿದರೆ ಮೂತ್ರಪಿಂಡದ ಮೂಲಕ ಹೃದಯಕ್ಕೆ ಸಂಚರಿಸುವ ಸಾಧ್ಯತೆ ಇದ್ದು, ನಿಧಾನವಾಗಿ ನರಮಂಡಲದ ತುಂಬೆಲ್ಲ ಹರಡಿ ಪಾರ್ಶ್ವವಾಯು ಅಪಾಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರಕರಣ ಸಂಬಂಧ ಪೊಲೀಸರು 6 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button