Belagavi NewsBelgaum NewsKannada NewsKarnataka NewsNationalPolitics

*ಚಿಕ್ಕೋಡಿ-ನಿಪ್ಪಾಣಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಯುವಕರು ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಚಿಂಚಣಿ ಟೋಲ್ ನಾಕಾ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಟ್ರಕ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.​ಅಪಘಾತದಲ್ಲಿ ಮೃತಪಟ್ಟ ಯುವಕರನ್ನು ಚಿಕ್ಕೋಡಿಯ ಓತಾರಿ ಗಲ್ಲಿಯ ನಿವಾಸಿಗಳಾದ ಸಿದ್ದು ಕುರಳೆ ಮತ್ತು ಸ್ವರೂಪ್ ಮಾಳವದೆ ಎಂದು ಗುರುತಿಸಲಾಗಿದೆ. 

Home add -Advt

ಮೃತ ಯುವಕರು ತಮ್ಮ ಕೆಲಸ ಮುಗಿಸಿಕೊಂಡು ಬೈಕ್ ಮೇಲೆ ಮನೆಗೆ ಮರಳುತ್ತಿದ್ದರು. ಚಿಂಚಣಿ ಟೋಲ್ ಗೇಟ್ ತಲುಪುತ್ತಿದ್ದಂತೆ, ಇವರ ಬೈಕ್ ಚಿಕೋಡಿ ಕಡೆಗೆ ಸಾಗುತ್ತಿದ್ದ ಟ್ರಕ್‌ಗೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

​ಡಿಕ್ಕಿಯ ರಭಸಕ್ಕೆ ಯುವಕರಿಬ್ಬರು ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related Articles

Back to top button